Friday, September 18, 2026

BDA Apartments

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ BDA JK_Adv BDA Adv
Home Front Page OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

I have duly implemented the recommendations of the Seventh Pay Commission. I will take an appropriate decision after the committee reports on the implementation of OPS. In addition, a suitable decision has also been taken regarding Arogya Sanjeevini, Chief Minister Siddaramaiah assured.

vtu

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಜತೆಗೆ ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ.  ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.

ಸಿಎಂ ಭರವಸೆ cm-ksou cm ksou

ಜಾತಿ-ಧರ್ಮ‌ ಮಾಡೋಕೆ ಹೋಗಬಾರದು :

ಪ್ರತಿಭೆ ಯಾರ ಸೊತ್ತೂ ಅಲ್ಲ.  ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದರು.

ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ,  ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

key words: CM, Siddaramaiah, promises, committee report, OPS implementation

vtu

SUMMARY: 

CM Siddaramaiah promises to discuss and decide after receiving committee report on OPS implementation.

siddaramaiah promises ksou-governament ksou governament

I have duly implemented the recommendations of the Seventh Pay Commission. I will take an appropriate decision after the committee reports on the implementation of OPS. In addition, a suitable decision has also been taken regarding Arogya Sanjeevini, Chief Minister Siddaramaiah assured.