ಬಿಜೆಪಿ ಶಾಸಕರ ಅತೃಪ್ತಿ ಶಮನಕ್ಕೆ ‘ಅನುದಾನದ ಮುಲಾಮು’ ಹಚ್ಚಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಲು ಮುಂದಾಗುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವ ಭರವಸೆ ನೀಡಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಹೌದು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಬಿಜೆಪಿ ಶಾಸಕರ ಜೊತೆ ಯಡಿಯೂರಪ್ಪನವರು ಸಮಾಲೋಚನೆ ನಡೆಸಿದ್ದಾರೆ. ನೆರೆ – ಬರ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಅವರುಗಳ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ್ದಾರೆ.