ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು…

ಮೈಸೂರು,ನವೆಂಬರ್,27,2020(www.justkannada.in): ಬೈಕ್  ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ  ಬೈಕ್ ಸವಾರ  ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.I didn't knew CM BSY will think so cheaply - KPCC President D.K. Shivakumar

ಹುಣಸೂರು ಆದಿ ಚುಂಚನಗಿರಿ ಕಲ್ಯಾಣ‌ ಮಂಟಪದ ಬಳಿ ಈ ಘಟನೆ ನಡೆದಿದೆ. ಮಹದೇವ  ಅಪಘಾತದಲ್ಲಿ ಮೃತ ದುರ್ದೈವಿ. ಅಪಘಾತದಲ್ಲಿ ಮತ್ತೊಬ್ಬ ಸವಾರ ದೇವೇಂದ್ರ ಎಂಬಾತನಿಗೆ ಗಂಭೀರ ಗಾಯವಾಗಿದ್ದು ಗಾಯಾಳು  ದೇವೇಂದ್ರರನ್ನ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.collision-between-bike-auto-death-bike-rider-hunsur

ಮಹದೇವ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಚಿಲ್ಕುಂದ ಗ್ರಾಮದ ನಿವಾಸಿಯಾಗಿದ್ದಾರೆ. ಈ ಕುರಿತು ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Key words: Collision –between-Bike –Auto-death – bike rider-hunsur