ತೈಲಬೆಲೆ ಏರಿಕೆಗೆ ಖಂಡನೆ: ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ…

ಮೈಸೂರು,ಜೂ,29,2020(www.justkannada.in): ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಭವನದ ಮುಂದೆ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು , ರಾಜ್ಯ ,ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಭಟನೆ ಎಂಎಲ್ ಸಿ ಧರ್ಮಸೇನಾ, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಕಾಂಗ್ರೆಸ್ ನಗರಧ್ಯಕ್ಷ ಆರ್ ಮೂರ್ತಿ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಸೇರಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.Condemn- oil price- hike-Congress -protests - Mysore

ಕೇಂದ್ರ ಸರ್ಕಾರ ದಿನೇ ದಿನೇ ತೈಲ ಬೆಲೆ ಏರಿಕೆ ಮಾಡುತ್ತಿದೆ ಹಾಗೂ ಮಹಾಮಾರಿ ಕೊರೋನಾವನ್ನ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರೆಡು ವಿಫಲವಾಗಿವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದರು. ಈ ಕುರಿತು ಜಿಲ್ಲಾಧಿಕಾರಿಗಳ ಮುಖಾಂತರ  ರಾಷ್ಟ್ರಪತಿಗಳಿಗೆ ಪತ್ರ ರವಾನಿಸಿದರು. ಇದೇ ವೇಳೆ  ಮಾಜಿ ಶಾಸಕ ಎಂ.ಕೆ.ಸೋಮಶೇಖರ್  ಸೈಕಲ್ ಏರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.

Key words: Condemn- oil price- hike-Congress -protests – Mysore