ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲಿಸಲು ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ- ಮಾಜಿ ಸಿಎಂ ಹೆಚ್.ಡಿಕೆ ಹೊಸಬಾಂಬ್.

ಮೈಸೂರು,ಏಪ್ರಿಲ್,6,2023(www.justkannada.in) ವರುಣಾದಲ್ಲಿ ಸಿದ್ದರಾಮಯ್ಯರನ್ನ ಗೆಲ್ಲಿಸಲು ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದರು.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿವೆ.  ಸಿದ್ದರಾಮಯ್ಯರನ್ನ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ.  ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸಮರ್ಥ ಅಭ್ಯರ್ಥಿ ಹಾಕ್ತಿಲ್ಲ.  ಬಿಜೆಪಿ-ಜೆಡಿಎಸ್ ಒಳ್ಳ ಒಪ್ಪಂದ ಅಲ್ಲ,  ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ. ಜೆಡಿಎಸ್ 123ಸ್ಥಾನ ಗೆಲ್ಲಲು ಹೋರಾಟ ಮಾಡುತ್ತಿದೆ ಎಂದು ಹೇಳಿದರು.

ಬಿಜೆಪಿಯಲ್ಲಿ ಮೋದಿಯಂತ ಸ್ಟಾರ್ ನಟರೇ ಇದ್ದಾರೆ . ಮೋದಿ ಕೈಯಲ್ಲೇ ಜನರನ್ನ ಸೆಳೆಯಲು ಆಗಿಲ್ಲ. ಇನ್ನು ಈ  ಸ್ಟಾರ್ ನಟರು ಏನು ಮಾಡುತ್ತಾರೆ ನೋಡೋಣಾ ಎಂದು ಹೆಚ್.ಡಿಕೆ ಲೇವಡಿ ಮಾಡಿದರು.

ಹಾಸನದಿಂದ ಕಾರ್ಯಕರ್ತನಿಗೆ ಟಿಕೆಟ್ ಎಂದು ಹೇಳಿದ್ದೇನೆ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇವೆ ಎಂದರು.

ಇನ್ನು ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಅಭ್ಯರ್ಥಿ ಇಲ್ಲದ್ದಕ್ಕೆ  ಅನಿತಾ ಅವರು 2ಬಾರಿ ಸ್ಪರ್ಧಿಸಿದ್ದರು.  ಈ ಬಾರಿ ಅನಿತಾ ಸ್ಪರ್ಧಿಸಲ್ಲ. ಅಗತ್ಯ ವಿದ್ದರೇ ಪಕ್ಷ ಸಂಘಟನೆಗೆ ಓಡಾಡುತ್ತಾರೆ ಎಂದರು.

Key words: Congress-BJP  – win -Siddaramaiah – Varuna- Former CM -HDK