ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ ನೀಡಿ ದೇಶದ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಇಂದು ಅಸ್ಸಾಂನ  ಚಿಲಚರ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುದ್ದದ ವಿಚಾರವಾಗಿ ಕಾಂಗ್ರೆಸ್ ಸುಳ್ಳು ಹೇಳಿಕೆ ನೀಡುತ್ತಿದೆ  ಜನರಲ್ಲಿ ಆತಂಕ ಉಂಟು ಮಾಡುವ ಹೇಳಿಕೆಗಳನ್ನ ನೀಡುತ್ತಿದ್ದಾರೆ ಗೊಂದಲಕಾರಿ  ಹೇಳಿಕೆ ನೀಡಿ ಜನರಲ್ಲಿ ಭೀತಿ ಹೆಚ್ಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ದೆಹಲಿಯಲ್ಲಿ  ಎಐ ಶೃಂಗಸಭೆ ನಡೆಯಿತು.  ಕಳೆದ ತಿಂಗಳು ವಿಶ್ವದ ಎಐ ಶೃಂಗಸಭೆ ಆಯೋಜಿಸಿದ್ದವು  ವಿಶ್ವದ 80ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಬಂದಿದ್ದರು. ಈವರೆಗೆ ಅಭಿವೃದ್ದಿಶೀಲ ರಾಷ್ಟ್ರದಲ್ಲಿ ಇಂತಹ ಸಮ್ಮೇಳನ ನಡೆದಿರಲಿಲ್ಲ ಆದರೆ ಕಾಂಗ್ರೆಸ್ ಪಕ್ಷ ಭಾರತ ಜಾಗತೀಕ ಕಾರ್ಯಕ್ರಮವನ್ನ   ಕೊಳಕು ರಾಜಕೀಯದಿಂದ ನೋಡಿತು ಎಂದು ಟೀಕಿಸಿದರು.

ಅಸ್ಸಾಂನಲ್ಲಿ ಶಿಲ್ಲಾಂಗ್- ಚಿಲಚರ್ ಕಾರಿಡಾರ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ 24 ಸಾವಿರ ಕೋಟಿ ವೆಚ್ಚದಲ್ಲಿ ಹೈಸ್ಪೀಡ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಕಾರಿಡಾರ್ ಮೂರು ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತೆ. ನಮ್ಮ ಸರ್ಕಾರ ಈಶಾನ್ಯ ರಾಜ್ಯಗಳ ಅಭಿವೃದ್ದಿ ಮಾಡಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: Congress,  false statements, war , PM Modi