ಗುತ್ತಿಗೆದಾರರು ಬ್ಲ್ಯಾಕ್ ​ಮೇಲ್ ಅಲ್ಲ, ಪ್ರೀತಿ ತೋರಿಸುತ್ತಿದ್ದಾರೆ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಆಗಸ್ಟ್,8,2023(www.justkannada.in): ಬಾಕಿ ಬಿಲ್ ಪಾವತಿಗೆ  ಕಮಿಷನ್ ಕೇಳಿದ ಆರೋಪದ ಮೇಲೆ ತಮ್ಮ ವಿರುದ್ದ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ ವಿಚಾರ ಕುರಿತು ಡಿಸಿಎಂ ಡಿ.ಕೆ ಶೀವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರಿಗೆ ದೂರು ಕೊಡಲಿ, ಸಿಎಂಗೂ ದೂರು ಕೊಡಲಿ. ನಮಗೂ‌ ಸಾಕಷ್ಟು ವರದಿ ಬಂದಿದೆ, ನೈಜತೆ ಪರಿಶೀಲಿಸಿ ಎಂದಿದ್ದಾರೆ. ಯಾರು ಕೆಲಸ ಮಾಡಿದ್ದಾರೋ ಅವರಿಗೆ ಬಿಲ್​ ಪಾವತಿ ಮಾಡುತ್ತೇವೆ, ಹಲವು ನಕಲಿ ಬಿಲ್ ​ಗಳು ನನ್ನ ಗಮನಕ್ಕೆ ಗಮನಕ್ಕೆ ಬಂದಿವೆ. ಈ ಬಗ್ಗೆ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗುತ್ತಿಗೆದಾರರು ಬ್ಲ್ಯಾಕ್​ಮೇಲ್ ಅಲ್ಲ, ಪ್ರೀತಿ ತೋರಿಸುತ್ತಿದ್ದಾರೆ. ನ್ಯಾಯಬದ್ಧವಾಗಿ ಕೆಲಸ ಮಾಡಿದವರಿಗೆ ಹಣ ಸಿಗಲೇಬೇಕು ಎಂದು ತಿಳಿಸಿದರು.

Key words: Contractors –  complained – Governor-  DCM -DK Sivakumar.