Sunday, August 23, 2026

BDA Apartments

Home Front Page ಸಂಕಷ್ಟದ ಕಾಲದಲ್ಲಿ ಸಹಕಾರ ನೀಡಿದವರಿಗೆ ಶೀಘ್ರವಾಗಿ ಸನ್ಮಾನಿಸಿ ಅಭಿನಂದನೆ-ಸಚಿವ ಎಸ್.ಟಿ.ಸೋಮಶೇಖರ್.

ಸಂಕಷ್ಟದ ಕಾಲದಲ್ಲಿ ಸಹಕಾರ ನೀಡಿದವರಿಗೆ ಶೀಘ್ರವಾಗಿ ಸನ್ಮಾನಿಸಿ ಅಭಿನಂದನೆ-ಸಚಿವ ಎಸ್.ಟಿ.ಸೋಮಶೇಖರ್.

ಮೈಸೂರು, ಜೂನ್.11,2021(www.justkannada.in):  ಕೋವಿಡ್ ನಂತಹ ಸಂಕಷ್ಟದ ಕಾಲದ ನಡುವೆಯೂ ಸಿ.ಎಸ್.ಆರ್ ವತಿಯಿಂದ ಜಿಲ್ಲೆಗೆ ಸಹಾಯ ಮಾಡುತ್ತಿರುವವರಿಗೆಲ್ಲರಿಗೂ ಲಾಕ್ ಡೌನ್ ಮುಗಿದ ನಂತರ ಅವರಿಗೆ ಸರ್ಕಾರದಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದು‌ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ  ಎಸ್.ಟಿ.ಸೋಮಶೇಖರ್ ಅವರು ಹೇಳಿದರು.jk

ಶುಕ್ರವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಏಷಿಯನ್ ಪೆಂಟ್ಸ್ ಹಾಗೂ ನೆಸ್ಲೆ ಕಂಪನಿಯು ಸ್ಯಾನಿಟೈಸರ್ ಹಾಗೂ ಆಕ್ಸಿಜನ್ ಕಾನ್ಸಂಟೇಟರ್ ಅನ್ನು ಸ್ವೀಕರಿಸಿದ ಬಳಿಕ  ಸಚಿವ ಎಸ್.ಟಿ ಸೋಮಶೇಖರ್ ಅವರು ಮಾತನಾಡಿದರು.

ಕೋವಿಡ್ ಸಂಕಷ್ಟದ ಕಾಲದಲ್ಲಿ ಜಿಲ್ಲೆಗೆ ಹಲವಾರು ಮಂದಿ ಸಹಾಯ ಮಾಡುತ್ತಿದ್ದಾರೆ. ಸರ್ಕಾರದ ನಿಯಮದಂತೆ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆಯಾಗಿದೆ. ಇದರ ಬಗ್ಗೆ ಮೊದಲೆ 11 ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಸಂಸದರ ಜೊತೆ  ಚರ್ಚಿಸಿದ ನಂತರವೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದರು.

ಕೋವಿಡ್ ನಂತಹ ಕಷ್ಟಕಾಲದಲ್ಲಿ ಮೃಗಾಲಯಕ್ಕೆ ಸಾಕಷ್ಟು ನಷ್ಟವಾಗಿದೆ. ಆದರೆ ಚಿತ್ರನಟ ದರ್ಶನ್ ಅವರ ಅಭಿಮಾನಿಗಳು ಒಂದುಕೋಟಿ ಹಣವನ್ನು ನೀಡಿದ್ದಾರೆ. ಹೀಗಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು.

ಇದಾದ ನಂತರ ನಗರ ಬನ್ನಿಮಂಟಪದ ಯಲ್ಲಮ್ಮ ಕಾಲೋನಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು. ಬಳಿಕ ಅರಗು ಮತ್ತು ಬಣ್ಣದ ಕಾರ್ಖಾನೆಗೆ ತೆರಳಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೆ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ  ಫಣೀಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್ ಮೈಸೂರು ನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

Key words: cooperation- –covid –times-mysore-Minister -ST Somashekhar