ಲಾಕ್ ಡೌನ್, ನೈಟ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್….

ಬೆಂಗಳೂರು,ಮಾರ್ಚ್,17,2021(www.justkannada.in): ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಚರ್ಚೆಗೆ ಬಂದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.jk

ಈ ಕುರಿತು ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್, ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಲಸಿಕೆ ಇರಲಿಲ್ಲ. ಚಿಕಿತ್ಸೆ ನೀಡೋದು ಗೊತ್ತಿರಲಿಲ್ಲ. ಆದರೆ ಈ ಬಾರಿ ಲಸಿಕೆ ಇದೆ. ಚಿಕಿತ್ಸೆ ನೀಡೋದು ಗೊತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.corona- no Lockdown- night curfew-- Minister -Sudhakar

ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ  ಇಲ್ಲ.  ಕೊರೋನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Key words: corona- no Lockdown- night curfew– Minister -Sudhakar