Monday, September 14, 2026

BDA Apartments

ವೈವಿಧ್ಯತೆಯಲ್ಲಿ ಏಕತೆ ಸಂದೇಶ ಸಾರಿದ ನ್ಯಾಯಾಲಯ: ಹಿಂದೂ ಮಹಾಸಭಾ ವಕೀಲ BDA JK_Adv BDA Adv
Home Front Page ವೈವಿಧ್ಯತೆಯಲ್ಲಿ ಏಕತೆ ಸಂದೇಶ ಸಾರಿದ ನ್ಯಾಯಾಲಯ: ಹಿಂದೂ ಮಹಾಸಭಾ ವಕೀಲ

ವೈವಿಧ್ಯತೆಯಲ್ಲಿ ಏಕತೆ ಸಂದೇಶ ಸಾರಿದ ನ್ಯಾಯಾಲಯ: ಹಿಂದೂ ಮಹಾಸಭಾ ವಕೀಲ

ನವದೆಹಲಿ, ನವೆಂಬರ್ 09, 2019 (www.justkannada.in): ರಾಮ ಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಚಾರಿತ್ರಿಕ ತೀರ್ಪು ನೀಡಿದೆ ಎಂದು ಹಿಂದೂ ಮಹಾಸಭಾ ವಕೀಲ ವರುಣ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ವೈವಿಧ್ಯತೆಯಲ್ಲಿ ಏಕತೆಯ ಸಂದೇಶವನ್ನು ಸಾರಿದೆ ಎಂದು ಹೇಳಿದರು. ಇದೇ ವೇಳೆ ಅಲ್ಲಿ ಸೇರಿದ ಕೆಲ ವಕೀಲರ ಗುಂಪಿನಿಂದ ಜೈ ಶ್ರೀ ರಾಮ್ ಘೋಷಣೆ ಮೊಳಗಿಸಲಾಯಿತು. ನಂತರ ಇತರ ವಕೀಲರು ಹಾಗೆ ಮಾಡದಂತೆ ತಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಮತ್ತೋರ್ವ ವಕೀಲ, ವಿಷ್ಣು ಶಂಕರ್ ಜೈನ್, ಅಯೋಧ್ಯೆಯಲ್ಲಿನ ಪ್ರಮುಖ ಸ್ಥಳದಲ್ಲಿ ಪರ್ಯಾಯವಾಗಿ ಮುಸ್ಲಿಂರಿಗೆ 5 ಎಕರೆ ಜಮೀನು ನೀಡುವಂತೆ ಕೋರ್ಟ್ ಆದೇಶಿಸಿದೆ ಎಂದು ತಿಳಿಸಿದರು.