ಪಾರಂಪರಿಕ ತಜ್ಞರ ತಂಡದಿಂದ ಮೈಸೂರಿನ ಚಾಮುಂಡಿ ಬೆಟ್ಟದ ಪ್ರಸಿದ್ದ ಏಕಶಿಲಾ ನಂದಿ ವಿಗ್ರಹದ ಬಿರುಕು ಪರಿಶೀಲನೆ.

 

ಮೈಸೂರು, ಫೆ 18, 2020 : (www.justkannada.in news ) ಚಾಮುಂಡಿಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ತಂಡವೊಂದು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿತು.
ಪುರಾತತ್ವ ಇಲಾಖೆ ಹಿರಿಯ ಅಧಿಕಾರಿ ಆರ್. ಗೋಪಾಲ್ ನೇತೃತ್ವದ ಈ ತಂಡದಲ್ಲಿ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಭಾಗಿಯಾಗಿದ್ದರು.

ನಂದಿ ವಿಗ್ರಹ ಸುಮಾರು 400 ವರ್ಷಗಳ ಹಳೆಯ ವಿಗ್ರಹವಾಗಿದ್ದು 1659-73 ರಲ್ಲಿ ನಿರ್ಮಾಣ ಗೊಂಡಿತ್ತು. ಚಾಮುಂಡಿ ಬೆಟ್ಟದ ಮೇನ್ ಅಟ್ರ್ಯಾಕ್ಷನ್ ಆಗಿರುವ ಈ ನಂದಿ ವಿಗ್ರಹ ವರ್ಷಕ್ಕೆ ಎರಡು ಬಾರಿ ಮಹಾ ಮಜ್ಜನ ನಡೆಯೋ ಪುಣ್ಯ ಸ್ಥಳವಾಗಿದೆ. ಇಂಥ ನಂದಿ ವಿಗ್ರಹದ ಕಾಲು, ಕತ್ತು ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ.

Crack inspection of the famous monolithic Nandi statue of Chamundi hill in Mysore by a team of experts.

ಕಪ್ಪಾಗಿದ್ದ ನಂದಿ ವಿಗ್ರಹವನ್ನ ಪಾಲಿಶ್ ಮಾಡಿಸಿ ಇತ್ತೀಚೆಗೆ ಹೊಸ ರೂಪ ಕೊಡಲಾಗಿತ್ತು. ಈ ಮೂಲಕ ಕಪ್ಪಾಗಿದ್ದ ವಿಗ್ರಹ ಬಿಳಿಯಾಗಿ ಪರಿವರ್ತನೆ ಮಾಡಲಾಗಿತ್ತು. ಈ ವೇಳೆ ವೈಜ್ಞಾನಿಕವಾಗಿ ಸಂರಕ್ಷಣೆ ಮಾಡದ ಹಿನ್ನೆಲೆಯಲ್ಲಿ ಬಿರುಕು ಮೂಡಿದೆ ಎನ್ನಲಾಗಿತ್ತು.
ಈ ಸಂಬಂಧ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಪಾರಂಪರಿಕ ತಜ್ಞರ ಸಮಿತಿಯೊಂದನ್ನ ರಚಿಸಿ ವಿಗ್ರಹ ಪರಿಶೀಲನೆಗೆ ಸೂಚಿಸಲಾಗಿತ್ತು. ಅದರಂತೆ ಇಂದು ಅಧಿಕಾರಿಗಳ ತಂಡ ವಿಗ್ರಹ ಪರಿಶೀಲನೆ ನಡೆಸಿತು.

ನಂದಿ ಹಿನ್ನೆಲೆ :

Crack inspection of the famous monolithic Nandi statue of Chamundi hill in Mysore by a team of experts.

1659 ರಲ್ಲಿ ದೊಡ್ಡ ದೇವರಾಜ ಒಡೆಯರ್ ಇವರ ಅವಧಿಯಲ್ಲಿ 1000 ಮೆಟ್ಟಿಲುಗಳನ್ನು ಮತ್ತು ಈಶ್ವರನಿಗೆ ಬಹುಪ್ರಿಯವಾದ ನಂದಿಯ ಬಹುದೊಡ್ಡ ನಂದಿ ವಿಗ್ರಹವನ್ನು ನಿರ್ಮಿಸಲಾಯಿತು. ಈ ವಿಗ್ರಹವು 16 ಅಡಿ (4.8 ಮೀಟರ್) ಮುಂಭಾಗ ಮತ್ತು 25 ಅಡಿ (7.5 ಮೀ) ಉದ್ದವಿರುತ್ತದೆ. ಈ ನಂದಿ ವಿಗ್ರಹಕ್ಕೆ ಬಹು ದೊಡ್ಡ ಮತ್ತು ಆಕರ್ಷಣೆಯಿಂದ ಕೂಡಿದ ಘಂಟೆಗಳನ್ನು ಇದರ ಕುತ್ತಿಗೆ ಭಾಗದಲ್ಲಿ ನಿರ್ಮಿಸಲಾಗಿದೆ.
ನಂದಿ ಮತ್ತು ದೇವಸ್ಥಾನವು ಪಕ್ಕದಲ್ಲಿಯೇ ಇದ್ದು ಚಾಮುಂಡಿ ಬೆಟ್ಟಕ್ಕೆ ಹತ್ತುವ 700 ನೇ ಮೆಟ್ಟಿಲಿನ ಬಳಿಯೇ ನಿರ್ಮಿಸಲಾಗಿದೆ.

Key words: Cracks in the famous monolithic Nandi statue in the Chamundi Hills of Mysore

 

Crack inspection of the famous monolithic Nandi statue of Chamundi hill in Mysore by a team of experts.