ಬೆಂಗಳೂರು,ಜೂನ್,27,2026 (www.justkannada.in): ವಿಧಾನ ಪರಿಷತ್ ನಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಲಾಗಿದೆ.
ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿ ವರದಿ ಸಲ್ಲಿಕೆ ಮಾಡಿದೆ. ಈ ವೇಳೆ ಮಾಜಿ ಸಚಿವ ಎನ್.ಮಹೇಶ್ ಉಪಸ್ಥಿತರಿದ್ದರು.
ಜೂನ್ 18 ರಂದು ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿಂದ ಅಡ್ಡಮತದಾನ ಮಾಡಲಾಗಿತ್ತು. ಈ ಸಂಬಂಧ ಬಿಜೆಪಿಯಲ್ಲಿ ಅಡ್ಡಮತದಾನ ಮಾಡಿದ್ದು ಯಾರೆಂಬುದನ್ನ ತಿಳಿಯಲು ಎಂಎಲ್ ಸಿ ಸಿ.ಟಿ ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು.
ಇದೀಗ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಿದ್ದು ವರದಿಯನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ರವಾನಿಸುವ ಸಾಧ್ಯತೆ ಇದೆ. ಅಡ್ಡಮತದಾನ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲು ಬಿಜೆಪಿ ಮುಂದಾಗಿದೆ.
Key words: Cross-voting, Report, submitted, BY Vijayendra






