Thursday, September 3, 2026

BDA Apartments

Home Cinema ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ನಟ ದುನಿಯ್ ವಿಜಯ್ ಗೆ ಎದುರಾಯ್ತು ಸಂಕಷ್ಟ…..

ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ನಟ ದುನಿಯ್ ವಿಜಯ್ ಗೆ ಎದುರಾಯ್ತು ಸಂಕಷ್ಟ…..

ಬೆಂಗಳೂರು,ಜ,20,2020(www.justkannada.in): ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ ದುನಿಯಾ ವಿಜಯ್ ಗೆ ಇದೀಗ ಸಂಕಷ್ಟ ಎದುರಾಗಿದೆ.

ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ನಟ ದುನಿಯಾ ವಿಜಯ್ ಕೇಕ್ ಅನ್ನ ತಲ್ವಾರ್ ನಿಂದ ಕತ್ತರಿಸಿದ್ದು ಈ ಹಿನ್ನೆಲೆ ನಟ ದುನಿಯಾ ವಿಜಯ್ ಗೆ ನೋಟೀಸ್ ನೀಡುವಂತೆ ಗಿರಿನಗರ ಠಾಣಾ ಪೊಲೀಸರಿಗೆ ಡಿಸಿಪಿ ರೋಹಿಣಿ ಕಟೋಚ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 ನಟ ದುನಿಯಾ ವಿಜಯ್ ಕೇಕ್ ಕಟ್ ಮಾಡಲು ತಲ್ವಾರ್  ಬಳಸಿದ ವಿಡಿಯೋ ವೈರಲ್ ಆಗಿದ್ದು, ದಕ್ಷಿಣ ವಿಭಾಗದ ಡಿಸಿಪಿ ಸೂಚನೆ ಮೇರೆಗೆ ದುನಿಯಾ ವಿಜಯ್ ಗೆ ನೋಟಿಸ್  ನೀಡಲು ಗಿರಿನಗರ ಠಾಣೆ ಪೊಲೀಸರು  ಸಿದ್ಧತೆ ನಡೆಸಿದ್ದಾರೆ. ಇನ್ನು ತಲ್ವಾರ್ ನಿಂದ ಕೇಕ್ ಕಟ್ ಮಾಡಿದ್ದ ಕುರಿತು ನಟ ದುನಿಯಾ ವಿಜಯ್ ಕ್ಷಮೆ ಕೇಳಿದ್ದಾರೆ.  ಈ ಬಗ್ಗೆ ನನಗೆ ಮಾಹಿತಿ ಇಲ್ಲ. ತಪ್ಪಾಗಿದ್ದರೇ ಕ್ಷಮೆಯಾಚಿಸುವುದಾಗಿ ದುನಿಯಾ ವಿಜಯ್ ತಿಳಿಸಿದ್ದಾರೆ ಎನ್ನಲಾಗಿದೆ.

Key words: Cut cake –Talwar- Birthday celebration- Actor Duniya Vijay -notice