Monday, September 14, 2026

BDA Apartments

Home Front Page ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ -ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ -ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ಜನವರಿ, 29,2025 (www.justkannada.in): ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು.ಮೈಕ್ರೋ ಫೈನಾನ್ಸ್ nypunya1

ಇಂದು ಜಿಲ್ಲಾ ಪಂಚಾಯತ್ ದೇವರಾಜ್ ಅರಸು ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ  ನಡೆಸಿ ಮಾತನಾಡಿದರು.

ಸಾಲ ವಸೂಲಾತಿಗೆ ಆರ್.ಬಿ.ಐ  ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡವಂತೆ ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ಒಬ್ಬ ವ್ಯಕ್ತಿಗೆ ಯಾವುದೇ ಪೂರ್ವಾಪರ ನೋಡದೇ ಅನೇಕ ಮೈಕ್ರೋ ಫೈನಾನ್ಸ್ ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್.ಬಿ.ಐ ಗೈಡ್ ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿರುವ ಘಟನೆಗಳು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಪರಿಗಣಿಸಿ ಸಾಲ ನೀಡಬೇಕು. ಆದರೆ ಅದನ್ನು ಕಡೆಗಣಿಸಿ ಮಿತಿ ಮೀರಿ ಸಾಲ ನೀಡಿ ನಂತರ ಸಾಲ ತೀರುವಳಿಗಾಗಿ ಒತ್ತಡ ಹಾಗೂ ಮಾನಸಿಕ ಹಿಂಸೆ ಮರು ಪಾವತಿಸುವಂತೆ  ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿ ದೂರುಗಳು ಬಂದರೆ ಕಂಪನಿಯ ಮ್ಯಾನೇಜರ್ ಮೇಲೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.

ಯಾವುದಾದರೂ ಮೈಕ್ರೋ ಫೈನಾನ್ಸ್ ಕಂಪೆನಿಗಳು ಬಲವಂತವಾಗಿ ಸಾಲ ತಿರುವಳಿಕೆಗೆ ಒತ್ತಡ, ಮಾನಸಿಕ ಹಾಗೂ ಇನ್ನಿತರ ಮೂಲಕ ಹಿಂಸಿಸಿದ್ದಲ್ಲಿ ಮೈಸೂರು ಜಿಲ್ಲಾ ನಿಯಂತ್ರಣಾ ಕೊಠಡಿ 1077 ಅಥವಾ 0821-2423800 ಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಸಾಲ ತಿರುವಳಿಕೆಗಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳು  ಏಜೆಂಟ್ ರನ್ನು ನೇಮಕ ಮಾಡಿ ಮಾನಸಿಕ ಹಿಂಸೆ ಹಾಗೂ ಒತ್ತಡ ಹಾಕಿದರೆ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಧೆಗಳು ಗರಿಷ್ಠ ಮಿತಿಯ ಸಾಲುಗಳನ್ನು ನೀಡುತ್ತಿರುವುದು ಕಂಡುಬಂದರೆ ಸಂಸ್ಥೆಯ ಮ್ಯಾನೇಜರ್ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಪ್ರಭಾಕರ್ ಹಾಗೂ ಮೈಕ್ರೋ ಫೈನಾನ್ಸ್ ಕಂಪೆನಿಯ ಮುಖ್ಯಸ್ಥರು ಉಪಸ್ಥಿತರಿದ್ದರು.

Key words: Microfinance, Criminal case, Mysore DC, G. Lakshmi Kantha Reddy