Sunday, August 30, 2026

BDA Apartments

Home Front Page ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು  ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಎಲ್ಲಾ ಕಾಂಗ್ರೆಸ್ ಶಾಸಕರು ಪಕ್ಷದ ಶಿಸ್ತನ್ನ ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ ಎಂದು ಚಾಟಿ ಬೀಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್, “ಪಕ್ಷದ ವತಿಯಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ ಎಂದರು.

Key words: Disciplinary action, unnecessary statements, DCM, D.K. Shivakumar, warns, MLAs