ಬೆಂಗಳೂರು,ಮಾರ್ಚ್,16,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಾಳೆ ಬೆಳಿಗ್ಗೆ 9.55ಕ್ಕೆ ವಿಮಾನದ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ನಾಳೆ ದೆಹಲಿಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ವಪಕ್ಷ ಸಂಸದರ ಸಭೆ ನಡೆಯಲಿದೆ.
ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸಂಸದರು ಇಲಾಖೆ ಅಧಿಕಾರಿಗಳೂ ಭಾಗವಹಿಸಲಿದ್ದು, ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ. ಸಭೆ ಬಳಿಕ ರಾತ್ರಿ ದೆಹಲಿಯಲ್ಲೇ ಡಿಕೆ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ.
Key words: DCM, DK Shivakumar, Delhi, tomorrow







