ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್

ಬೆಂಗಳೂರು,ಮಾರ್ಚ್,20,2026 (www.justkannada.in):  ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ.

ವಿಧಾನಸೌಧದ ಡಿಸಿಎಂ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಆರ್.ಆಶೋಕ್ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬನಶಂಕರಿ ದೇವಸ್ಥಾನದ ಬಳಿ ಉದ್ದೇಶಿತ ಸ್ಕೈ ವಾಕ್ ನಿರ್ಮಾಣ ಕಾಮಗಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.  ಬಿಜೆಪಿ ಅವಧಿಯಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ತೀರ್ಮಾನ ಆಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರ್.ಅಶೋಕ್ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Key words:  R. Ashok, met, discussed, DCM, DK Shivakumar