Friday, August 28, 2026

BDA Apartments

Home Front Page ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ- ಡಿಸಿಎಂ ಡಿಕೆ ಶಿವಕುಮಾರ್

ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ- ಡಿಸಿಎಂ ಡಿಕೆ ಶಿವಕುಮಾರ್

ಹುಬ್ಬಳ್ಳಿ,ಏಪ್ರಿಲ್,7,2026 (www.justkannada.in):  ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ  ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು ಗೌಣ.  ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದು ನುಡಿದಿದ್ದಾರೆ.

ಇನ್ನು ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ.  ನಮ್ಮ ಕಾರ್ಯಕ್ರಮಗಳಿಂದ ಜನ ಖುಷಿಯಾಗಿದ್ದಾರೆ.  ಹೀಗಾಗಿ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: DCM, DK Shivakumar, CM post,  Jameer Ahmed Khan