ಬೆಂಗಳೂರು,ಮೇ,6,2026 (www.justkannada.in): ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನ ಗೆದ್ದು ಹೊಸ ಅಲೆ ಸೃಷ್ಠಿಸಿರುವ ಟಿವಿಕೆ ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, ತಮಿಳುನಾಡಿನ ಹಿತಕ್ಕಾಗಿ ಟಿವಿಕೆಗೆ ನಮ್ಮ ಪಕ್ಷ ಬೆಂಬಲ ನೀಡಿದೆ. ಹಾಗೆಯೇ ಅಧಿಕಾರದಿಂದ ಬಿಜೆಪಿಯನ್ನ ದೂರವಿಡುವ ಉದ್ದೇಶದಿಂದಲೇ ಟಿವಿಕೆ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕಾರಣ ಬಹಿರಂಗಪಡಿಸಿದರು.
ತಮಿಳುನಾಡಿನ ಹಿತ, ಜಾತ್ಯಾತೀತ ತತ್ವ ಉಳಿಯಲು ತೀರ್ಮಾನ ಕೈಗೊಂಡಿದ್ದೇವೆ. ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರೂ ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯಾತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ಮೈತ್ರಿ ತೀರ್ಮಾನ ಮಾಡಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
Key words: DCM, DK Shivakumar, Congress, alliance, with, TVK







