ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಭೇಟಿ: ಬೇಡಿಕೆ ಈಡೇರಿಸುವುದಾಗಿ ಭರವಸೆ…

ಬೆಂಗಳೂರು,ಫೆ,20,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸಾರಿಗೆ ನೌಕಕರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭವಾಗಿದ್ದು ಸಂಜೆ 5 ಗಂಟೆವರೆಗೆ ನಡೆಯಲಿದೆ.  ನೌಕರರ ಜೊತೆ ಕುಟುಂಬ ಸದಸ್ಯರೂ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.ಬೃಹತ್ ವೇದಿಕೆ ಹಾಕಿ ಸಾರಿಗೆ ನೌಕರರು ಪ್ರೀಡಂ ಪಾರ್ಕ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಸತ್ಯಾಗ್ರಹಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಬೆಂಬಲ ನೀಡಿದ್ದಾರೆ.

ಸತ್ಯಾಗ್ರಹನಿರತ ಸ್ಥಳಕ್ಕೆ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಭೇಟಿ ನೀಡಿದ್ದು ಸಾರಿಗೆ ನೌಕರರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ನೌಕರರ ಮನವಿ ಪತ್ರಗಳನ್ನ ಸ್ವೀಕರಿಸಿದ್ದೇನೆ.  ಸಾರಿಗೆ ನಿಗಮಗಳ  ನೌಕರರ ಬೇಡಿಕೆ ಈಡೇರಿಸುತ್ತೇವೆ. ಸಮಿತಿ ರಚನೆ ಮಾಡಿ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

Key words: DCM -Laxman Sawadi -visits –ksrtc-workers’-protest-demand- Fulfillment