Thursday, August 13, 2026

BDA Apartments

Home Front Page ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ : ನಟ ಜಗ್ಗೇಶ್ ಆಕ್ರೋಶ

ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ : ನಟ ಜಗ್ಗೇಶ್ ಆಕ್ರೋಶ

ಬೆಂಗಳೂರು,ಡಿಸೆಂಬರ್,27,2020(www.justkannada.in) : ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ ಎಂದು ನಟ ಜಗ್ಗೇಶ್ ಆಕ್ರೋಶವ್ಯಕ್ತಪಡಿಸಿದ್ದಾರೆ.Teachers,solve,problems,Government,bound,Minister,R.Ashokಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಮಾತನಾಡಿದ ಅವರು, ಇದು ಕನ್ನಡಕ್ಕೆ ದುಡಿದು ಕಣ್ಮರೆಯಾದ ಕಲಾವಿದರ ಹಣೆಬರಹ. ತುಂಬ ದುಃಖವಾಯಿತು. ಎಲ್ಲಿ ಹೋಯಿತು ಚಪ್ಪಾಳೆ ಸದ್ದು?ಎಲ್ಲಿ ಹೋಯಿತು ಬದುಕಿದ್ದಾಗ ನೋಡಲು ನಿಂತ ಅಭಿಮಾನ?ಎಲ್ಲಿ ಹೋಯಿತು ಇವನಮ್ಮವ ಇವನಮ್ಮವ ಎಂದ ಮನಗಳು? ವಿಷ್ಣು ಪ್ರತಿಮೆ ಧ್ವಂಸ ಕನ್ನಡಕ್ಕೆ ಮಾಡಿದ ಅವಮಾನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರನ್ನ 45 ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ? ಆತನ ಆತ್ಮ ಈ ರಾಕ್ಷಸಿ ಕೃತ್ಯ ಗಮನಿಸದೆ ಇರಬಹುದು. ಆದರೆ, ನೆನಪಿಡಿ ನೀವು ಅಪಮಾನಿಸಿದ್ದು, ನಿಮ್ಮ ರಂಜಿಸಿ ನಿರ್ಗಮಿಸಿದ ನಟನನ್ನಲ್ಲಾ, ಬದಲಾಗಿ ನಿಮ್ಮ ಕನ್ನಡ ನೆಲದ ಮೆಚ್ಚಿನ ಮಗನನ್ನ. ನಿಮ್ಮ ತಂದೆ ತಾಯಿ ವಂಶ ಮೆಚ್ಚಿದ ಆತ್ಮ ಅದು. ನಿಮ್ಮ ಕೃತ್ಯ ಯಾವ ದೇವರು ಕ್ಷಮಿಸನು ಎಂದು ಹೇಳಿದ್ದಾರೆ.

Dead-also-killed-humiliated-Teach-sinners-Actor-Jaggesh- outrage

ಯಾವುದೋ ಭಾಷೆ ನಟನ ವೈಭವಿಕರಿಸಿ ವಿಶಾಲ ಹೃದಯ ಎನ್ನುವವರೆ. ನಿಮ್ಮರಂಜಿಸಿ ಖುಷಿಪಡಿಸಿ ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತಮೇಲು ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕ ಪಾಠ ಕಲಿಸಿ. ಕಲಾ ಬಂಧು ಶಿಲೆಯನ್ನ ಮರು ಸ್ಥಾಪಿಸಿ ಗೌರವಿಸಿ ಕನ್ನಡತನದ ವಿಶಾಲ ಹೃದಯ ಪ್ರದರ್ಶಿಸಿ. ರಂಜಿಸಿ ಕಣ್ಮರೆಯಾದ ಕಲಾವಿದರಿಗೆ ಹೃದಯದಲ್ಲಿ ಜಾಗನೀಡಿ. ಅದು ಕನ್ನಡದ ಧರ್ಮ ಎಂದು ತಿಳಿಸಿದ್ದಾರೆ.

key words : Dead-also-killed-humiliated-Teach-sinners-Actor-Jaggesh- outrage