ಸಾಲಬಾಧೆ ವಿಷ ಸೇವಿಸಿ ರೈತ ಆತ್ಮಹತ್ಯೆ..!

ಮೈಸೂರು,ಡಿಸೆಂಬರ್,28,2020(www.justkannada.in) : ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ.

ಮೃತ ರೈತ ಮಲ್ಲೇಶ್ ಗೌಡ(40) ಎಂದು ತಿಳಿದು ಬಂದಿದೆ. ಮಲ್ಲೇಶ್ ಗೌಡ ಖಾಸಗಿ ಸಂಸ್ಥೆಯಿಂದ ಸಾಲ ಪಡೆದಿದ್ದ. ಸಾಲಗಾರರ ಕಾಟ ತಾಳಲಾರದೆ ಸಾಲಭಾದೆಯಿಂದ ಖಿನ್ನತೆಗೆ ಒಳಗಾಗಿದ್ದ. ಹಾಗಾಗಿ, ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

Debtors-Farmer-commits-suicide-consuming-poison

ಚಿಕಿತ್ಸೆ ಫಲಕಾರಿಯಾಗದೆ ಮಲ್ಲೇಶ್ ಮರಣ ಹೊಂದಿದ್ದಾನೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : Debtors-Farmer-commits-suicide-consuming-poison