ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಳ್ಳಲು ಮುಂದಾಗಿದೆ.

ಈ ಕುರಿತು ಸ್ಥಳಾಂತರಿಸದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಆದೇಶ ಹೊರಡಿಸಿದ್ದಾರೆ. ಧಾರವಾಡ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು  ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಕೇಂದ್ರದ ಗಮನ ಸೆಳೆದಿದ್ದರು.

ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು.

ಪ್ರಹ್ಲಾದ್ ಜೋಶಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರ ನಿರ್ಧಾರ ವಾಪಸ್ ಪಡೆಯಲು ಪ್ರಸಾರ ಭಾರತಿ ಮುಂದಾಗಿದೆ ಎನ್ನಲಾಗಿದೆ.

Key words: Decision, Dharwad, All India Radio Station, Bengaluru, Prahlad Joshi