ಅಮಿತ್ ಶಾ ಹೇಳಿದ ತಕ್ಷಣ ಜನ ಜಗದೀಶ್ ಶೆಟ್ಟರ್ ಅವರನ್ನ ಸೋಲಿಸಿಬಿಡ್ತಾರಾ..?- ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್.

ಬೆಂಗಳೂರು,ಏಪ್ರಿಲ್,25,2023(www.justkannada.in):  ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗಿರುವ ಜಗದೀಶ್ ಶೆಟ್ಟರ್ ಅವರನ್ನ ಸೋಲಿಸಿ ಎಂದು ಕರೆ ನೀಡಿದ ಕೇಂದ್ರಗೃಹ ಸಚಿವ ಅಮಿತ್ ಶಾಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಜಗದೀಶ್ ಶೆಟ್ಟರ್ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.  ಅಮಿತ್ ಶಾ ಹೇಳಿದ ತಕ್ಷಣ ಜನ ಅವರನ್ನ ಸೋಲಿಸಿ ಬಿಡುತ್ತಾರಾ..? ಅಮಿತ್ ಶಾಗೂ ಕರ್ನಾಟಕಕ್ಕೂ ಏನ್ ಸಂಬಂಧ ಎಂದು ವಾಗ್ದಾಳಿ ನಡೆಸಿದರು.

Key words: defeat -Jagdish Shettar – Amit Shah – Former CM Siddaramaiah- Tong.