ವಿಪಕ್ಷ ನಾಯಕರ ಆಯ್ಕೆ ವಿಳಂಬ: ಬೇಸರ ಹೊರ ಹಾಕಿದ ಮಾಜಿ ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ,ಆಗಸ್ಟ್,2,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಅಧಿವೇಶನ ನಡೆದರೂ ಸಹ ಇನ್ನೂ ವಿಪಕ್ಷ ನಾಯಕರ ಆಯ್ಕೆಯಾಗದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ  ಮಾಜಿ ಸಚಿವ ಡಾ.ಕೆ.ಸುಧಾಕರ್ ಬೇಸರ ಹೊರ ಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ಕೆ.ಸುಧಾಕರ್, ಈವರೆಗೆ ವಿಪಕ್ಷ ನಾಯಕನನ್ನು ನೇಮಕ ಮಾಡದಿದ್ದಕ್ಕೆ ಬೇಸರವಾಗಿದೆ. ಈ ಬಗ್ಗೆ ಎಲ್ಲರೂ ಪ್ರಶ್ನಿಸುತ್ತಿದ್ದಾರೆ, ಪ್ರಶ್ನೆಗೆ ಉತ್ತರಿಸಲು ಮುಜುಗರ ಆಗುತ್ತಿದೆ ಎಂದು ಹೇಳಿದರು.

ಚುನಾವಣೆ ಸೋಲನ್ನು ನಾಯಕರ ಮೇಲೆ ತೀರಿಸಿಕೊಳ್ಳುವುದು ಸರಿಯಲ್ಲ. ಬಿಜೆಪಿ ಹೈಕಮಾಂಡ್‌ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಧಾಕರ್  ಮನವಿ ಮಾಡಿದ್ದಾರೆ.

Key words: Delay – opposition leaders-Former minister -Dr. K Sudhakar- expressed -frustration