ಮಂಡ್ಯ ಲೋಕಸಭೆ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪರ್ಧಿಸುವಂತೆ ಆಗ್ರಹ.

ಮಂಡ್ಯ,ಜನವರಿ,24,2024(www.justkannada.in): ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಈಗಾಗಲೇ ನಿರ್ಧರಿಸಿದ್ದು ಈ ಮಧ್ಯೆ  ಇದೀಗ ಮಂಡ್ಯದಿಂದ ಹೆಚ್.ಡಿ ದೇವೇಗೌಡರ ಸ್ಪರ್ಧೆಗೆ ಆಗ್ರಹ ಕೇಳಿ ಬಂದಿದೆ.

ಹೌದು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸುವಂತೆ  ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್  ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ರಮೇಶ್, ಲೋಕಸಭೆ ಚುನಾವಣೆಗೆ  ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು.  ಈ ಸಂಬಂಧ  ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹ  ಮಾಡಿದ್ದೇವೆ. ಸುದೀರ್ಘ ಚರ್ಚೆ ಮಾಡಿ ನಿರ್ಣಯ ಕೈಗೊಂಡಿದ್ದೇವೆ.  ಮಂಡ್ಯ  ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ ದೇವೇಗೌಡರು ಸ್ಪರ್ಧಿಸಬೇಕು. ಇನ್ನ ಎರಡು ಮೂರು ದಿನದಲ್ಲಿ ಹೆಚ್.ಡಿ ದೇವೇಗೌಡರನ್ನ ಭೇಟಿ ಮಾಡಿ ಅಭಿಪ್ರಾಯ ತಿಳಿಸುತ್ತೇವೆ ಎಂದು ರಮೇಶ್ ತಿಳಿಸಿದ್ದಾರೆ.

Key words: Demand – former PM-HD Deve Gowda-contest- Mandya LokSabha-constituency.