ಮಂಡ್ಯ ಉಸ್ತುವಾರಿ ನಾರಾಯಣಗೌಡ ವಿರುದ್ಧದ ಹೋರಾಟ ಹಿಂಪಡೆದ ದೇವೇಗೌಡ

ಬೆಂಗಳೂರು, ಜೂನ್ 28, 2020 (www.justkannada.in): ಮಂಡ್ಯದಲ್ಲಿ ಸಚಿವ ನಾರಾಯಣ ಗೌಡ ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದ ಆರೋಪಿಸಿ ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹಿಂಪಡೆದಿದ್ದಾರೆ.

ಟ್ವಿಟ್ಟರ್ ನಲ್ಲಿ ಈ ಮಾಹಿತಿ ನೀಡಿರುವ ಎಚ್ ಡಿ ದೇವೇಗೌಡರು, ಸರ್ಕಾರ ತಮ್ಮ ಬಹುಪಾಲು ಬೇಡಿಕೆಗಳಿಗೆ ಒಪ್ಪಿರುವುದರಿಂದ ಜೂನ್ 29ರಂದು ನಡೆಸಲಿಚ್ಛಿಸಿದ್ದ ಧರಣಿಯನ್ನು ವಾಪಾಸ್ ಪಡೆದಿರುವುದಾಗಿ ಹೇಳಿದ್ದಾರೆ.

ಸಕ್ರಮವಾಗಿರುವ ಅವರ ಕ್ರಷರ್​ಗೆ ಅನುಮತಿ ಕೊಡಿಸಬೇಕು, ಜಿಲ್ಲೆಯಲ್ಲಿ ರಾಜಕೀಯ ದ್ವೇಷ ಸಾಧಿಸುತ್ತಿರುವ ಸಚಿವ ನಾರಾಯಣಗೌಡ ಅವರಿಗೆ ತಿಳಿ ಹೇಳುವಂತೆ ದೇವೆಗೌಡರು ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು. ಇಲ್ಲದಿದ್ದರೆ ಜೂ.29ರಂದು ಸಿಎಂ ಯಡಿಯೂರಪ್ಪನವರ ಮನೆ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದರು.