ಬೆಂಗಳೂರು,ಆಗಸ್ಟ್,11,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆಯಾಗಲಿ ತಪ್ಪಿತಸ್ತರ ವಿರುದ್ದ ಶಿಕ್ಷೆಯಾಗಲಿ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಈ ಕುರಿತು ಮಾತನಾಡಿದ ಸಚಿವ ರಾಮಲಿಗರೆಡ್ಡಿ, ತನಿಖೆ ವಿಚಾರದಲ್ಲಿ ನಮ್ಮ ಸರ್ಕಾರ ಅತ್ಯಂತ ಪಾರದರ್ಶಕವಾಗಿದೆ. ಹಿಂದೆ ಸಿಬಿಐ ತನಿಖೆಗೆ ನೀಡಲಾಗಿತ್ತು ಈಗ ಎಸ್ ಐಟಿ ತನಿಖೆ ನಡೆಸುತ್ತಿದೆ ಬಿಜೆಪಿಗರು 4 ವರ್ಷ ಅಧಿಕಾರದಲ್ಲಿದ್ದರು ಏಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಈಗ ತನಿಖೆ ಆಗುತ್ತಾ ಇದೆ. ಈಗ ಮಾನಾಡುವುದು ಸರಿಯಲ್ಲ ಬಿಜೆಪಿಯವರ ಮಾತಿಗೆ ಬೆಲೆ ಕೊಡೋಕೆ ಹೋಗಬೇಡಿ ತನಿಖೆ ನಡೆಯುತ್ತಿರುವಾಗ ಮಾತನಾಡಿದರೇ ತಪ್ಪಾಗುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.
Key words: Dharmasthala case, investigated, punished ,Minister, Ramalingareddy