“ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರು: ಸಿದ್ದರಾಮಯ್ಯಗೆ ಇದೊಂದು ಸದಾವಕಾಶ : ರಾಜ್ಯ ಬಿಜೆಪಿ ಟೀಕೆ 

ಬೆಂಗಳೂರು,ಏಪ್ರಿಲ್,05,2021(www.justkannada.in) : ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.Dikshi's,name,CD case,Siddaramaiah,opportunity,State,BJP 

ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ.Dikshi's-name-CD case-Siddaramaiah-opportunity-State-BJP ಸದನದಲ್ಲಿ ಸಿಡಿ ಪ್ರಕರಣ ಪ್ರಸ್ತಾಪಿಸುವಾಗ ಡಿ.ಕೆ.ಶಿವಕುಮಾರ್ ಹೆಸರು ಪ್ರಕರಣದಲ್ಲಿ ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ, ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ, ಮತ್ತೆ ಕೆದಕುತ್ತಿದ್ದಾರೆ.

key words : Dikshi’s-name-CD case-Siddaramaiah-opportunity-State-BJP