Saturday, September 5, 2026

BDA Apartments

Home Front Page  ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್

 ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್

ಮಂಗಳೂರು,ಏಪ್ರಿಲ್,18,2026 (www.justkannada.in):  ಸಚಿವ ಸ್ಥಾನದಿಂದ ಜಮೀರ್ ಅಹ್ಮದ್ ಖಾನ್ ಅವರನ್ನ ಕೆಳಗಿಳಿಸುತ್ತಾರೆಂಬುದು ಕೇವಲ ಊಹಾಪೋಹ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪಕ್ಷದಲ್ಲಿ ಕೈಗೊಂಡ ಕೆಲ ಕ್ರಮಗಳಿಗೂ ಫಲಿತಾಂಶಕ್ಕೂ ಸಂಬಂಧವಿಲ್ಲ. ಉಪಚುನಾವಣೆ ಫಲಿತಾಂಶ ಏನಾಗುತ್ತೆ ಅಂತ ಯಾರಿಗೂ ಗೊತ್ತಿಲ್ಲ ಎಂದರು.

ಜಮೀರ್ ಅಹ್ಮದ್ ಖಾನ್ ಪಕ್ಷದ ಹಿರಿಯ ಮುಖಂಡರಿದ್ದಾರೆ  ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಜಮೀರ್ ದುಡಿಯುತ್ತಿದ್ದಾರೆ ಅದರೆ ಕೆಲವರು ಅದಕ್ಕೆ ಬಣ್ಣ ಕಟ್ಟಲು ಹೊರಟಿಬಹುದು.  ಈ ವಿಚಾರಗಳು ಪಕ್ಷದ ಚೌಕಟ್ಟಿನಲ್ಲಿ ಚರ್ಚಯಾಗುತ್ತೆ ಎಂದರು.

Key words: Zameer, ministerial post, speculation, Dinesh Gundu Rao