ಪೋಷಕ ನಟ ದಿನೇಶ್ ಮಂಗಳೂರು ನಿಧನ

ಬೆಂಗಳೂರು,ಆಗಸ್ಟ್,25,2025 (www.justkannada.in): ಪೋಷಕ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಇಂದು ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಕುಂದಾಪುರದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಮಂಗಳೂರು ಚಿಕಿತ್ಸೆ ಫಲಿಸದೆ ಬೆಳಗಿನ‌ಜಾವ ಮೃತಪಟ್ಟಿದ್ದಾರೆ.

‘ಆ ದಿನಗಳು’, ‘ಕೆಜಿಎಫ್’ ( KGF) , ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

ದಿನೇಶ್ ಮಂಗಳೂರು ಅವರು ಕಾಂತಾರ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದು,  ಅಂಕದಕಟ್ಟೆ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Key words: actor, Dinesh Mangalore, passes away