ಸಿಎಂ ಜತೆ ಚರ್ಚೆ ಬಳಿಕ ಕೆಲ ಮಹತ್ವದ ನಿರ್ಧಾರ – ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು,ಆ,14,2020(www.justkannada.in):  ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು  ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದು ನಂತರ ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.jk-logo-justkannada-logo

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸುತ್ತೇನೆ. ಸಭೆಯ ನಂತರ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಚರ್ಚಿಸುತ್ತೇನೆ. ಈ ವೇಳೆ ಗಲಭೆ ಕುರಿತು ಮಾಹಿತಿ ನೀಡಲಾಗುವುದು. ಸಿಎಂ ಜತೆ ಸಭೆ ಬಳಿಕ ಕೆಲ ಮಹತ್ವದ ನಿರ್ಧಾರಗಳನ್ನ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.discussion-cm-bs-yeddyurappa-important-decisions-home-minister-basavaraja-bommai

ಇನ್ನು ಡಿ.ಜೆ ಹಳ್ಳಿ, ಕೆಜಿಹಳ್ಳಿ ಕಾವಲ್ ಭೈರಸಂದ್ರದಲ್ಲಿ ಪೊಲೀಸರಿಂದ ಭದ್ರತೆ ವಹಿಸಲಾಗಿದ್ದು ಕರ್ಫ್ಯೂ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ. ಸೂಕ್ಷ್ಮ ಪ್ರದೇಶ, ರಸ್ತೆಗಳಲ್ಲಿ ಪೊಲೀಸರನ್ನ ನಿಯೋಜಿಸಲಾಗಿದ್ದು ಜನರು ಅನಾವಶ್ಯಕವಾಗಿ ಓಡಾಡದಂತೆ ಸೂಚಿಸಲಾಗಿದೆ.

Key words:   discussion –CM bs yeddyurappa- important- decisions -Home Minister -Basavaraja Bommai.