ದೆಹಲಿ ಹೈಕೋರ್ಟ್’ನಿಂದಲೂ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಸೆಪ್ಟೆಂಬರ್ 30, 2019 (www.justkannada.in): ದೆಹಲಿಯ ಹೈಕೋರ್ಟ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿದೆ.

ಐಟಿ ದಾಳಿಯಿಂದ ಇಡಿ ವಿಚಾರಣೆ, ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಇಡಿ ಕೋರ್ಟ್ ಜಾಮೀನು ನೀಡಲು ಕಳೆದ ಇತ್ತೀಚೆಗೆ ನಿರಾಕರಿಸಿತ್ತು. ಹೀಗಾಗಿ ದೆಹಲಿಯ ಹೈಕೋರ್ಟ್ ಗೆ ಜಾಮೀನು ನೀಡುವಂತೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ದೆಹಲಿಯ ಹೈಕೋರ್ಟ್, ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ರ ವರೆಗೆ ಮುಂದೂಡಿದೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಅಕ್ಟೋಬರ್ 14ರ ವರೆಗೆ ತಿಹಾರ್ ಜೈಲೆ ಗತಿ ಎಂಬಂತಾಗಿದೆ.