ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಭಯ ಬೇಡ, ನಿಶ್ಚಿಂತೆಯಿಂದ ಪರೀಕ್ಷೆ ಬರೆಯಿರಿ ಎಂದ ಸಚಿವ ಸುರೇಶ್ ಕುಮಾರ್

ಮೈಸೂರು, ಫೆಬ್ರವರಿ 22, 2020 (www.justkannada.in): ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪ್ರತಿಕೆ ಸೋರಿಕೆಯಾಗಿದೆ ಎನ್ನುವ ಕುರಿತು ಎಲ್ಲೆಡೆ ವದಂತಿ ಎಲ್ಲೆಡೆ ಹಬ್ಬಿರುವ ಕುರಿತು ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪ್ರತಿಕೆ ಸೋರಿಕೆಯಾಗಿದೆ ಎನ್ನುವ ಕುರಿತು ಎಲ್ಲೆಡೆ ವರದಿಯಾಗಿದ್ದು, ಈ ಪರೀಕ್ಷೆ ಮುಂಡೂಡಲಾಗುತ್ತದೆ ಎನ್ನುವ ಆತಂಕ ಮಕ್ಕಳಲ್ಲಿ ಎದುರಾಗಿದೆ.

ಆದರೆ ಆಯಾ ದಿನಾಂಕಗಳಲ್ಲೇ ಆಯಾ ಪರೀಕ್ಷೆಗಳು ನಡೆಯುತ್ತವೆ. ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗೂ ವ್ಯತ್ಯಾಸವಿದ್ದು, ಮುಖ್ಯ ಪರೀಕ್ಷೆಯ ಮಾದರಿ ಹೇಗಿರುತ್ತದೆ ಎನ್ನುವುದನ್ನು ತಿಳಿಸಲು ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಯಾವುದೇ ಆತಂಕ ಬೇಡ. ಎಲ್ಲರೂ ನಿಶ್ಚಿಂತೆಯಿಂದ ಪರೀಕ್ಷೆ ಬರೆಯಿರಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.