Thursday, August 6, 2026

BDA Apartments

Home Front Page ಮುಂದಿನ ಮುಖ್ಯಮಂತ್ರಿ ಬಗ್ಗೆ ಹೇಳಿಕೆ: ಶಾಸಕರಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ

ಮುಂದಿನ ಮುಖ್ಯಮಂತ್ರಿ ಬಗ್ಗೆ ಹೇಳಿಕೆ: ಶಾಸಕರಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ

ಬೆಂಗಳೂರು,ಜೂನ್,24,2021(www.justkannada.in):  ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಮನವಿ ಮಾಡಿದ್ದಾರೆ.jk

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಖಾನ್, ರಾಘವೇಂದ್ರ ಹಿಟ್ನಾಳ್, ಭೀಮಾನಾಯ್ಕ್, ಕಂಪ್ಲಿ ಗಣೇಶ್, ಹರಿಹರ ಶಾಸಕ ರಾಮಪ್ಪ ಸೇರಿ ಹಲವರು ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಹೇಳಿಕೆ ನೀಡಿದ್ದರು.

Key words: Don’t – statement -about – next CM-Former CM -Siddaramaiah – MLAs