Sunday, August 9, 2026

BDA Apartments

Home Front Page ಸಚಿವಾಕಾಂಕ್ಷಿಗಳ ಆಸೆಗೆ ಮೈಸೂರಲ್ಲಿ ತಣ್ಣಿರೆರಚಿದ ಶಿಕ್ಷಣ ಸಚಿವ.

ಸಚಿವಾಕಾಂಕ್ಷಿಗಳ ಆಸೆಗೆ ಮೈಸೂರಲ್ಲಿ ತಣ್ಣಿರೆರಚಿದ ಶಿಕ್ಷಣ ಸಚಿವ.

education-minister-nagesh-mysore

 

ಮೈಸೂರು, ಫೆ.06, 2022 : (www.justkannada.in news) ಸಚಿವ ಸಂಪುಟ ವಿಸ್ತರಣೆ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ, ಆದ್ರೆ ಪಕ್ಷದಲ್ಲಿ ಚರ್ಚೆ ಆಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದರು.

ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದಿಷ್ಟು..

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಹೈಕಮಾಂಡ್ ಸೂಕ್ತವಾದ ನಿರ್ಣಯ ಕೈಗೊಳ್ಳುತ್ತೆ. ಆದರೆ ಈ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಕೇವಲ ಮಾಧ್ಯಮಗಳಲ್ಲಿ ಮಾತ್ರ ವರದಿಯಾಗುತ್ತಿದೆ.
ರಾಜ್ಯ ಬಜೆಟ್ ಹಿನ್ನಲೆ ಕೇಂದ್ರ ನಾಯಕರ ಸಲಹೆ ಪಡೆಯಲು ಸಿಎಂ ದೆಹಲಿಗೆ ಹೋಗಿದ್ದಾರೆ. ಪ್ರತಿ ಬಜೆಟ್ ಗು ಮುನ್ನ ಹೈಕಮಾಂಡ್ ಹಾಗೂ ಕೇಂದ್ರ ಸಚಿವರು, ಸಂಸದರ ಜೊತೆ ಮಾತುಕತೆ ನಡೆಸುವುದು ಸಹಜ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಸಚಿವ ಬಿ.ಸಿ.ನಾಗೇಶ್, ಸಂಪುಟ ವಿಸ್ತರಣೆ ಸುದ್ದಿಯನ್ನೇ ಪರೋಕ್ಷವಾಗಿ ಅಲ್ಲಗೆಳೆದಂತಾಗಿದೆ.

ಹಿಜಾಬ್ ವಿವಾದ :

ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ. ಸ್ಪಷ್ಟವಾಗಿ ಹೇಳಿದ್ದೇವೆ ಸಮವಸ್ತ್ರವಿಲ್ಲದೆ ಶಾಲೆಗಳಿಗೆ ಪ್ರವೇಶ ಇಲ್ಲ. ಸಮವಸ್ತ್ರ ಆದೇಶವನ್ನ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದಿದ್ರೆ ಸರ್ಕಾರಿ ನಿಯಮದಂತೆ ಕ್ರಮ‌. ಮೈಸೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ.

ಯಾವುದೇ ಹೆಣ್ಣುಮಕ್ಕಳಿಗೆ ಶಿಕ್ಷಣ ವಂಚಿತ ಮಾಡುವ ದುರುದ್ದೇಶ ಇಲ್ಲ. ಎಜುಕೇಷನ್ ಅ್ಯಕ್ಟ್ ರೂಲ್ 11 ಅನ್ವಯ ನಿಯಮ ಜಾರಿ ಮಾಡಿದ್ದೇವೆ. ಎಜುಕೇಶನ್ ಪಾಲಿಸಿ ಬಿಜೆಪಿ ಸರ್ಕಾರ ಮಾಡಿರೋದಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗಿನಿಂದಲೂ ಇದೆ. ಇದರಲ್ಲಿ ಅನಾವಶ್ಯಕ ರಾಜಕಾರಣ ಮಾಡಬಾರದು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗಲೂ ಜಾರಿಯಲ್ಲಿವೆ. ಆ ನಿಯಮದ ಅನ್ವಯವೇ ಆದೇಶ ಮಾಡಿದ್ದೇನೆ. ರಾಜಕೀಯ ಲಾಭಕ್ಕೆ ಮಕ್ಕಳನ್ನ ಬಳಸಿಕೊಳ್ಳಬಾರದು. ಮಕ್ಕಳನ್ನು ಅಸ್ತ್ರ ಮಾಡಿಕೊಂಡು ರಾಜಕೀಯ ಮಾಡಬೇಡಿ. ಮೈಸೂರಿನಲ್ಲಿ ಸಚಿವ ಬಿ.ಸಿ‌.ನಾಗೇಶ್ ಹೇಳಿಕೆ.

key words : education-minister-nagesh-mysore