ಬೆಂಗಳೂರಿನಲ್ಲಿ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು:ಆ-25:(www.justkannada.in) ವೃದ್ಧ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಲೂರಿನಲ್ಲಿ ನಡೆದಿದೆ. ಮೊದಲಿಗೆ ಪತ್ನಿಗೆ ವಿಷ ನೀಡಿ ಅವರನ್ನು ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಿರಿನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕೃಷ್ಣಮೂರ್ತಿ(70) ಹಾಗೂ ಸ್ವರ್ಣ(68) ಮೃತರು. ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧಾಪ್ಯದಲ್ಲಿದ್ದ ಕೃಷ್ಣಮೂರ್ತಿ ಹಾಗೂ ಪತ್ನಿ ಸ್ವರ್ಣರನ್ನು ಮಗ-ಸೊಸೆ ಚೆನ್ನಾಗಿ ನೋಡಿಕೊಳ್ಳದೇ ಕಡೆಗಣಿಸಿದ್ದರು ಇದರಿಂದ ನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ವರ್ಣಾ ಅವರು ಕಳೆದ ಒಂದು ವರ್ಷದಿಂದ ಬೆನ್ನುನೋವಿನಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅವರನ್ನು ಮಗ-ಸೊಸೆ ಸರಿಯಾಗಿ ಆರೈಕೆ ಮಾಡುತ್ತಿರಲಿಲ್ಲ. ಇದರಿಂದ ನೊಂದ ದಂಪತಿ ಬೇಸರಗೊಂಡು ಸಾವಿಗೆ ಶರಣಾಗಿದ್ದಾರೆ ಎಂಬ ಆರೋಪಿ ಕೇಳಿಬಂದಿದೆ.

ಬೆಂಗಳೂರಿನಲ್ಲಿ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣು

Elderly couple commit suicide in Bengaluru