ಕೌಟುಂಬಿಕ ಕಲಹ: ನಾಲ್ವರು ಆತ್ಮಹತ್ಯೆಗೆ ಯತ್ನ:  ಮೂವರು ಸಾವು.

ಶಿಡ್ಲಘಟ್ಟ,ಫೆಬ್ರವರಿ,22,2023(www.justkannada.in):  ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ನಡೆದಿದೆ.

ಶಿಡ್ಲಘಟ್ಟ ತಾಲ್ಲೂಕಿನ ಹೆಣ್ಣೂರಿನಲ್ಲಿ ಈ ಘಟನೆ ನಡೆದಿದೆ. ನೇತ್ರ(35),  ವರ್ಷಿತಾ(12), ಸ್ನೇಹಾ(9) ಮೂವರು ಸಾವಿಗೀಡಾಗಿದ್ದಾರೆ.  ಪತಿ ಸೋಣಪ್ಪ ಸ್ಥಿತಿ ಗಂಭೀರವಾಗಿದೆ. ಸೀಮೆ ಎಣ್ಣೆ ಸುರಿದುಕೊಂಡು ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Family – Four –attempted- suicide-Three -died.