ಅಪ್ಪು ನೆನೆದ ಅಭಿಮಾನಿಗಳು: ರಾಜ್ಯದೆಲ್ಲೆಡೆ ಪುನೀತ್ 2ನೇ ವರ್ಷದ ಪುಣ್ಯ ಸ್ಮರಣೆ

ಮೈಸೂರು, ಅಕ್ಟೋಬರ್ 29, 2023 (www.justkannada.in): ಅಭಿಮಾನಿಗಳ ನೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 2ನೇ ಪುಣ್ಯ ಸ್ಮರಣೆಯನ್ನು ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ.

ಪುನೀತ್ ರಾಜ್ ಕುಮಾರ್ ಎಲ್ಲರನ್ನು ಅಗಲಿ 2 ವರ್ಷ ಕಳೆದಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.  ಪುಣ್ಯಸ್ಮರಣೆಗೆ ಅಪ್ಪು ಸಮಾಧಿ ನಿರ್ಮಾಣ ಮಾಡಲಾಗಿದೆ. ರಾಜ್​ ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ.

ಪುನೀತ್ ರಾಜ್ ಕುಮಾರ್​ ಸ್ಮಾರಕವನ್ನು ಬಿಳಿ ಮಾರ್ಬಲ್ಸ್​ ​ನಲ್ಲಿ ನಿರ್ಮಾಣ ಮಾಡಲಾಗಿದೆ. ಸ್ಮಾರಕದ ಮೇಲೆ ಪುನೀತ್ ರಾಜ್ ಕುಮಾರ್ ಫೋಟೋ ಇದೆ. ಸ್ಮಾರಕದ ಸುತ್ತಲ್ಲೂ ಸಾದೇನಹಳ್ಳಿ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ.

ಇಂದು ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗೂ ಮಕ್ಕಳು ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ರಾಘಣ್ಣ, ಶಿವಣ್ಣ ಸೇರಿದಂತೆ ಕುಟಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.