Tuesday, August 25, 2026

BDA Apartments

Home Front Page ಖಾಲಿ ಹುದ್ದೆಗಳ ಭರ್ತಿಗೆ ಹೋರಾಟ: ಜಿಲ್ಲಾಧಿಕಾರಿಗಳ ಮನವೊಲಿಕೆಗೂ ಬಗ್ಗೆದ ವಿದ್ಯಾರ್ಥಿಗಳು

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟ: ಜಿಲ್ಲಾಧಿಕಾರಿಗಳ ಮನವೊಲಿಕೆಗೂ ಬಗ್ಗೆದ ವಿದ್ಯಾರ್ಥಿಗಳು

ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಮನವಿ ಆಲಿಸಿದರು.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜುಬಿಲಿ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ನೇಹಲ್ ಅವರು ಭೇಟಿ ವಿದ್ಯಾರ್ಥಿಗಳ ಬೇಡಿಕೆ ಆಲಿಸಿದರು.

ಈ ವೇಳೆ ಮಾತನಾಡಿದ ಡಿಸಿ ಸ್ನೇಹಲ್, ಬೆಳಿಗ್ಗೆಯಿಂದ ನಡೆದ ಹೋರಾಟದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ.  ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದ್ದೇನೆ. ರಾಜ್ಯ ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ನೀವು ನಿಮ್ಮ ಸಿದ್ದತೆ ಆರಂಭಿಸಿ ಎಂದು ಭರವಸೆ ನೀಡಿದರು.

ಆದರೆ ಜಿಲ್ಲಾಧಿಕಾರಿಗಳ ಮಾತಿಗೆ ವಿರೋಧ ವ್ಯಕ್ತಪಡಿಸಿದ ಉದ್ಯೋಗಾಕಾಂಕ್ಷಿಗಳು ಯಾವುದೇ ಕಾರಣಕ್ಕೂ ಇಲ್ಲಿಂದ ಹೋಗಲ್ಲ ಅಧಿಸೂಚನೆ ಹೊರಡಿಸುವವರೆಗೂ ಹೋರಾಟ ನಿಲ್ಲಿಸಲ್ಲ. ಬೇಕೆ ಬೇಕು ನ್ಯಾಯಬೇಕು ಎಂದು ಆಗ್ರಹಿಸಿದರು. ಕೆಲ ಮಹಿಳಾ ಉದ್ಯೋಗಾಕಾಂಕ್ಷಿಗಳು ಡಿಸಿ ಎದುರೇ ಕಣ್ಣೀರು ಹಾಕಿ ಅಳಲು ತೋಡಿಕೊಂಡರು.

ಸ್ಥಳದಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ತೆರಳಿದ ಬಳಿಕ  ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದಿದ್ದಾರೆ.

Key words: fill, vacant posts, Students, Protest, Dharwad, DC