Sunday, August 2, 2026

BDA Apartments

Home Cinema ವಂಚನೆ ಆರೋಪ: ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್‌ಐಆರ್ ದಾಖಲು

ವಂಚನೆ ಆರೋಪ: ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು, ಡಿಸೆಂಬರ್ 26, 2020 (www.justkannada.in): ನಿರ್ಮಾಪಕ ಕೆ.ಮಂಜು ವಿರುದ್ಧ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ.

‘ಹೆಬ್ಬೆಟ್ ರಾಮಕ್ಕ’ ಸಿನಿಮಾದ ನಿರ್ಮಾಪಕ ಪುಟ್ಟರಾಜು ಅವರು ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಕೆ.ಮಂಜು ವಿರುದ್ಧ ದೂರು ದಾಖಲಿಸಿದ್ದಾರೆ.

ಕೆ.ಮಂಜು ಮಾತ್ರವಲ್ಲದೆ ಹೊಸಕೋಟೆಯ ರಾಜಗೋಪಾಲ್, ರಮೇಶ್ ಬಾಬು, ವಿಜಯಲಕ್ಷ್ಮಿ ಎಂಬುವರ ವಿರುದ್ಧವೂ ಪುಟ್ಟರಾಜು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 420, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಕೆ.ಮಂಜು ಎರಡನೇ ಆರೋಪಿ ಆಗಿದ್ದಾರೆ.