ಅಗ್ನಿ ಅವಘಡ: ಬೆಂಕಿ ಕೆನ್ನಾಲಿಗೆ 10 ಬಸ್ ಗಳು ಸುಟ್ಟು ಭಸ್ಮ.

ಬೆಂಗಳೂರು,ಅಕ್ಟೋಬರ್ 30,2023(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲಾಗಿವೆ.

ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 10ಕ್ಕೂ ಹೆಚ್ಚು ಬಸ್ ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮದಳ ವಾಹನಗಳು ಆಗಮಿಸಿ , ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ ​ಗೆ ಬೆಂಕಿ ಹೊತ್ತಿಕೊಂಡಿದೆ. ವಿವಿಧ ಸಂಸ್ಥೆಗಳಿಗೆ ಸೇರಿದ ಬಸ್ ಗಳಾಗಿದ್ದು, ರಿಪೇರಿಗಾಗಿ  ತಂದು ಪಾರ್ಕಿಂಗ್ ಲಾಟ್ ನಲ್ಲಿ ನಿಲ್ಲಿಸಲಾಗಿತ್ತು.

Key words: Fire accident-10 buses –burnt-Bangalore