ಶಬರಿಮಲೆಯಲ್ಲಿ ಐದು ದಿನ ಪೂಜಾ ಕಾರ್ಯಕ್ರಮ : ಪಂಪಾ ನದಿಯಲ್ಲಿ ಸ್ನಾನಕ್ಕಿಲ್ಲ ಅವಕಾಶ….

ತಿರುವನಂತಪುರ,ಅಕ್ಟೋಬರ್,10,2020(www.justkannada.in) : ಅ.16ರಿಂದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ 5 ದಿನಗಳ ಕಾಲ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಕೊರೊನಾ ಹಿನ್ನೆಲೆ ಒಂದು ಬಾರಿಗೆ 250 ಮಂದಿ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ತಿಳಿಸಲಾಗಿದೆ.

jk-logo-justkannada-logo

ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಇತರೆ ಅಗತ್ಯ ಎಲ್ಲಾ ಸಿದ್ಧತೆಗಳನ್ನು ಪೂರ್ತಿಗೊಳಿಸಲಾಗಿದೆ. ಕೇರಳ ಸಶಸ್ತ್ರ ಪೊಲೀಸ್ ಪಡೆ(ಕೆಎಪಿ)ಯ ಐದನೇ ಬೆಟಾಲಿಯನ್ ಕಮಾಂಡೆಂಟ್ ಕೆ.ರಾಧಾಕೃಷ್ಣನ್ ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆಯನ್ನು ನಡೆಸಿದ್ದಾರೆ.Five-day-worship-program-Sabarimala-bathing- opportunity-Pampa-River

ಭಕ್ತಾದಿಗಳಿಗೆ ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೋವಿಡ್ ಟೆಸ್ಟ್

ವಶಶ್ಯೇರಿಕ್ಕರ ಮತ್ತು ಎರುಮಲೆ ಮಾರ್ಗಗಳನ್ನು ಹೊರತುಪಡಿಸಿ ಇತರ ಎಲ್ಲಾ ಸಂಪರ್ಕಗಳನ್ನು ರದ್ದುಗೊಳಿಸಲಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೋವಿಡ್ ಟೆಸ್ಟ್ ಗೆ ಒಳಗಾಗಬೇಕು.

ಅಲ್ಲಿ ನೆಗೆಟಿವ್ ವರದಿಯಾದರೆ ಮಾತ್ರ ಮಲೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಪಂಪಾ ನದಿಯಲ್ಲಿ ಸ್ನಾನಕ್ಕೆ ಈ ಬಾರಿ ಅವಕಾಶ ಕಲ್ಪಿಸಲಾಗಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.

key words : Five-day-worship-program-Sabarimala-bathing- opportunity-Pampa-River