ರಾಜ್ಯ  ಪಡಿತರ ಚೀಟಿದಾರರಿಗೆ ‘ಆಹಾರದ ಕಿಟ್’ ನೀಡಲು ಸರ್ಕಾರ ಚಿಂತನೆ

ಬೆಂಗಳೂರು,ಜೂನ್,24,2025 (www.justkannada.in):  ರಾಜ್ಯದ ಪಡಿತರ ಚೀಟಿದಾರರಿಗೆ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಹೌದು. ಕಾಂಗ್ರೆಸ್ ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ  ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಹಣವನ್ನ ಪಡಿತರ ಚೀಟಿದಾರರ ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ನಂತರ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎನ್ನಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಚಿವ ಸಂಪುಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿದರೆ ಸದ್ಯದಲ್ಲೇ ಆಹಾರ ಕಿಟ್ ನೀಡುವ ಯೋಜನೆ ಜಾರಿಗೆ  ಬರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಬಗ್ಗೆ ಇಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.vtu

Key words: government, food kits, ration card,  holders