ಒಳಮೀಸಲಾತಿಗೆ ಸಂಪುಟ ಉಪಸಮಿತಿ ರಚನೆ ಕೇವಲ ಕಣ್ಣೊರೆಸುವ ತಂತ್ರ- ಸಿದ್ಧರಾಮಯ್ಯ ಟೀಕೆ.

ಬೆಂಗಳೂರು,ಡಿಸೆಂಬರ್,14,2022(www.justkannada.in): ಒಳ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿದ್ದು ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಉಪಸಮಿತಿ ರಚನೆ ಕೇವಲ ಕಣ್ಣೊರೆಸುವ ತಂತ್ರ. ಸದಾಶಿವ ಆಯೋಗ ವರದಿ ಮಂಡನೆಯಾಗಿಲ್ಲ. ಅಸೆಂಬ್ಲಿಯಲ್ಲಿ ವರದಿ ಚರ್ಚೆಯೂ ಆಗಿಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಕೇಳವ ಕಣ್ಣೊರೆಸುವ ತಂತ್ರ ಬೇಡ ಎಂದು ಹೇಳಿದ್ದಾರೆ.

Key words: Formation – cabinet- sub-committee – internal reservation – Siddaramaiah