Saturday, August 15, 2026

BDA Apartments

Home Front Page ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ

ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ

ನವದೆಹಲಿ, ಫೆಬ್ರವರಿ ,11,2026 (www.justkannada.in):  ರಾಜ್ಯ ಕಾಂಗ್ರೆಸ್  ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು,  ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯವಾದರು ಎಂದು ಕಿಡಿಕಾರಿದರು.

ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಮತ್ತು ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ.  ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: Closing, Kannada, government schools , condemnable, Former CM, Bommai