ನಿವೃತ್ತ ಲೋಕಾಯುಕ್ತ ವೆಂಕಟಾಚಲ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ…

ಬೆಂಗಳೂರು,ಅ,30,2019(www.justkannada.in):  ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ ಅವರ ನಿಧನಕ್ಕೆ  ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ವಯೋಸಹಜ ಖಾಯಿಲೆಯಿಂದ  ಇಂದು ನಿವೃತ್ತ ಲೋಕಾಯುಕ್ತ ವೆಂಕಟಾಚಲ ಅವರು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು. ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿ ಸಂತಾಪ ಸೂಚಿಸಿರುವ  ಮಾಜಿ ಸಿಎಂ ಸಿದ್ದರಾಮಯ್ಯ, ವೆಂಕಟಾಚಲ ಅವರು ಭ್ರಷ್ಟರ ವಿರುದ್ದ ಸಮರ ಸಾರಿ ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದರು. ಅವರ ಸಾವಿನ ಸುದ್ಧಿ ಕೇಳಿ ನನಗೆ ನಿಜಕ್ಕೂ ನೋವಾಗಿದೆ ಎಂದು ತಿಳಿಸಿದ್ದಾರೆ.

Key words: Former CM Siddaramaiah- Condolences- death – retired -Lokayukta Venkatachala.