Saturday, August 1, 2026

BDA Apartments

Home Front Page ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆಗೆ ಯತ್ನ: ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಎಂದ ಡಿ.ಕೆ ಶಿವಕುಮಾರ್.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆಗೆ ಯತ್ನ: ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಎಂದ ಡಿ.ಕೆ ಶಿವಕುಮಾರ್.

ಹಾಸನ,ಜೂನ್,3,2021(www.justkannada.in): ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಕ್ಷಣೆಗೆ ಮುಂದಾಗಿದ್ದಾರೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.jk

ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ. ಸಿ.ಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದಲೇ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನ ರಕ್ಷಣೆ ಮಾಡುತ್ತಿದ್ದಾರೆ ಎಂದು. ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.

ಇನ್ನು ಸರ್ಕಾರ ಆನ್ ಲೈನ್  ಮೂಲಕ ಲಸಿಕೆ ನೋಂದಣಿ ನಿಲ್ಲಿಸಿದೆ. 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲು ಸರ್ಕಾರದ ಬಳಿ ಲಸಿಕೆ ಇಲ್ಲ.  ಹೀಗಾಗಿ ಕೈಮುಗಿದ್ದು ಕೇಳಿಕೊಳ್ಳುತ್ತೇವೆ. ಭಿಕ್ಷೆ ಬೇಡುತ್ತೇವೆ. ಲಸಿಕೆ ಕೊಡಿ. ಜನರ ಜೀವ ಉಳಿಸಿ. ಚಿಕ್ಕಮಕ್ಕಳು ಯುವಕರಿಗೆ ಲಸಿಕೆ ನೀಡಿ ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

Key words: former minister-Ramesh jarkiholi- CD case-kpcc President-DK Shivakumar