ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ. ಬಿಜೆಪಿ ಗೆಲುವು ಗ್ಯಾರಂಟಿ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು.
ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಶ್ರೀರಾಮುಲು, ಬಾಗಲಕೋಟೆ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರ ಆಟ ನಡೆಯಲ್ಲ. ಸಿದ್ದರಾಮಯ್ಯ ಭಾದಾಮಿ ಶಾಸಕರಾಗಿದ್ದಾಗ ಅಭಿವೃದ್ದಿ ಮಾಡಿಲ್ಲ. ಆಗ ಕಳ್ಳಮತಗಳಿಂದ ನನ್ನ ವಿರುದ್ದ ಸಿದ್ದರಾಮಯ್ಯ ಗೆದ್ದಿದ್ದರು ಈ ವೇಳೆ ಸಿಎಂ ಇಬ್ರಾಹಿಂ ಅವರೇ ಹೇಳಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್ ಗೆಲ್ಲಲ್ಲ. ಇಡೀ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ. ವಾಲ್ಮೀಕಿ ಸಮುದಾಯಕ್ಕೆ ಸತೀಶ್ ಜಾರಕಿಹೊಳಿ ಏನು ಮಾಡಿದ್ದಾರೆ ವಾಲ್ಮಿಕಿ ನಿಗಮದ ಹಗರಣದ ಬಗ್ಗೆ ಸತೀಶ್ ಧ್ವನಿ ಎತ್ತಲಿಲ್ಲ ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.
Key words: Bagalkote, By-election, Congress, Former Minister, Sriramulu







