ಮೂರ್ನಾಲ್ಕು ದಿನಗಳಲ್ಲಿ ಮೈಸೂರಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಪಾಯ: ಭಾರತಿ ವಿಷ್ಣುವರ್ಧನ್

ಬೆಂಗಳೂರು, ಡಿಸೆಂಬರ್ 18, 2019 (www.justkannada.in): ಮೂರ್ನಾಲ್ಕು ದಿನಗಳಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಪಾಯ ಕಾರ್ಯ ಆರಂಭವಾಗಲಿದೆ.

ಈ ಕುರಿತು ಸ್ವತಃ ಸಿಎಂ ಭರವಸೆ ನೀಡಿದ್ದಾರೆ ಎಂದು ಭಾರತಿ ವಿಷ್ಣುವರ್ಧನ್​ ಹೇಳಿದ್ದಾರೆ. ಸಿಎಂ ಬಿಎಸ್‌ವೈ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.

ಈಗಾಗಲೇ ಸ್ಮಾರಕ ಕಾರ್ಯ ಮೈಸೂರಿನಲ್ಲಿ ನಡೆಯುತ್ತಿದೆ‌.‌ ಯಡಿಯೂರಪ್ಪ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ‌. ವಿಷ್ಣುವರ್ಧನ್ ಯಡಿಯೂರಪ್ಪ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.